ಶ್ರೀ ಗಾಯತ್ರಿ ಪೀಠ ಮಹಾ ಸಂಸ್ಥಾನ ಹೇಮಕೂಟ ಹಂಪಿ ಶ್ರೀ ಜಗದ್ಗುರು ದಯಾನಂದಪುರಿ ಸ್ವಾಮೀಜಿ
ಹಾಗು ಶ್ರೀ ಶಿವಾನಂದ ಸ್ವಾಮೀಜಿ ಯವರ ಆಶೀರ್ವಚನ
ಕನ್ನಡ ನಾಡಿನ ಶಿವ ಶರಣರರಲ್ಲಿ ದೇವರ ದಾಸಿಮಯ್ಯನವರು 11 ನೇ ಶತಮಾನದಲ್ಲಿ ಆಗಿ ಹೋದ ಶರಣರು. ಮಹಾಶಿವಶರಣರಲ್ಲಿ ಇವರೊಬ್ಬರು ಮತ್ತು ಶರಣ ಸಂಪ್ರದಾಯ ದಲ್ಲಿ ಮೊದಲಿಗರು ಹಾಗು ಆದ್ಯ ವಚನಕಾರ ಪಿತಾಮಹ, ಜನಪದ ಜಗದ್ಗುರು ಎಂಬ ಬಿರುದು ಸಹ ಇವರಿಗೆ ಇದೆ. ದೇವರ ದಾಸಿಮಯ್ಯನು ಒಬ್ಬ ಐತಿಹಾಸಿಕ ಪುರುಷ ನೆಂಬುದಕ್ಕೆ ಶಿಲಾ ಶಾಸನ ಗಳು ಬಲವಾದ ಪ್ರಮಾಣ ಗಳಾಗಿವೆ. ಅವನ ನಂತರ ಸ್ವಲ್ಪ ಕಾಲದಲ್ಲಿಯೇ ಅವತರಿಸಿದ ಬಸವಣ್ಣನವರು ಈ ಶರಣ ದಂಪತಿಗಳ ಮಹಿಮೆಯನ್ನು ಅವರ ಚರಿತ್ರೆ ಯಲ್ಲಿ ಘಟನೆ ಗಳನ್ನು, ವಚನಗಳನ್ನು ತನ್ನ ವಚನ ವಾಜ್ಞ ಯದಲ್ಲಿ ನಿರರ್ಗಳವಾಗಿ ಉಲ್ಲೇಖಿಸಿದ್ದಾರೆ.
ದಾಸಿಮಯ್ಯನು ವೃತ್ತಿ, ನೇಯ್ಗೆಯ ವೃತ್ತಿ. ನೇಯ್ಗೆಯ ಕಾಯಕವನ್ನು ಮಾಡಿ ಅನೇಕ ಪವಾಡ ಗಳನ್ನು ಮಾಡಿದ್ದಾನೆ. ಅಲ್ಲದೆ ಸಾಕ್ಷತ್ ಪರಶಿವನಿಂದ ತವನಿಧಿಯನ್ನು ಪಡೆದ ಶರಣ. ಈ ಶರಣನು ಜ್ಞಾನಿಯೂ ಬೋಧೆಯಲ್ಲಿ ಬಲ್ಲಿದನೂ ಆದಂತೆ, ವಚನ ಸಾಹಿತ್ಯ ರಚನೆಯಲ್ಲಿಯೂ ಪ್ರಬಲನಾಗಿದ್ದನು. ಅಲಂಕಾರಿಕವಾದ ಸ್ವಲ್ಪ ಶಬ್ದಗಳ ನುಡಿಯಲ್ಲಿ ದಿವ್ಯವಾದ, ವಿಶಾಲವಾದ ಅರ್ಥ, ಯಾರೂ ತೆಗೆದು ಹಾಕದಂತಹ ಅಭಿಪ್ರಾಯ ಇಂತಹ ಅಮೃತ ಬಿಂದು ಮನೋಜ್ಞವಾಣಿ ಆತನ ವಚನಗಳಾಗಿವೆ.
ದಾಸಿಮಯ್ಯನು ವೃತ್ತಿ, ನೇಯ್ಗೆಯ ವೃತ್ತಿ. ನೇಯ್ಗೆಯ ಕಾಯಕವನ್ನು ಮಾಡಿ ಅನೇಕ ಪವಾಡ ಗಳನ್ನು ಮಾಡಿದ್ದಾನೆ. ಅಲ್ಲದೆ ಸಾಕ್ಷತ್ ಪರಶಿವನಿಂದ ತವನಿಧಿಯನ್ನು ಪಡೆದ ಶರಣ. ಈ ಶರಣನು ಜ್ಞಾನಿಯೂ ಬೋಧೆಯಲ್ಲಿ ಬಲ್ಲಿದನೂ ಆದಂತೆ, ವಚನ ಸಾಹಿತ್ಯ ರಚನೆಯಲ್ಲಿಯೂ ಪ್ರಬಲನಾಗಿದ್ದನು. ಅಲಂಕಾರಿಕವಾದ ಸ್ವಲ್ಪ ಶಬ್ದಗಳ ನುಡಿಯಲ್ಲಿ ದಿವ್ಯವಾದ, ವಿಶಾಲವಾದ ಅರ್ಥ, ಯಾರೂ ತೆಗೆದು ಹಾಕದಂತಹ ಅಭಿಪ್ರಾಯ ಇಂತಹ ಅಮೃತ ಬಿಂದು ಮನೋಜ್ಞವಾಣಿ ಆತನ ವಚನಗಳಾಗಿವೆ.
'ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಬುದೆ?
ಕಡೆಗೀಲು ಬಂಡಿಗಾಧಾರ. ಈ ಕಡುದರ್ಪವೇರಿದ ಒಡಲೆಂಬ ಬಂಡಿಗೆ
ಮೃಢಭಕ್ತರ ನುಡಿಗಡಣವೆ ಕಡೆಗೀಲು ಕಾಣಾ! ರಾಮನಾಥ.'
ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ. ಅನುಭಾವ ಭಕ್ತಿಗಾಧಾರ;
ಅನುಭಾವ ಭಕ್ತಿಗೆ ನೆಲೆವನೆ. ಅನುಭಾವ ಉಳ್ಳವರ ಕಂಡು ತುರ್ಯ
ಸಂಭಾಷಣೆಯ ಬೆಸಗೊಳ್ಳದಿದ್ದಡೆ ನರಕದಲ್ಲಿಕ್ಕಯ್ಯಾ! ರಾಮನಾಥ.
ಕಡೆಗೀಲು ಬಂಡಿಗಾಧಾರ. ಈ ಕಡುದರ್ಪವೇರಿದ ಒಡಲೆಂಬ ಬಂಡಿಗೆ
ಮೃಢಭಕ್ತರ ನುಡಿಗಡಣವೆ ಕಡೆಗೀಲು ಕಾಣಾ! ರಾಮನಾಥ.'
ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ. ಅನುಭಾವ ಭಕ್ತಿಗಾಧಾರ;
ಅನುಭಾವ ಭಕ್ತಿಗೆ ನೆಲೆವನೆ. ಅನುಭಾವ ಉಳ್ಳವರ ಕಂಡು ತುರ್ಯ
ಸಂಭಾಷಣೆಯ ಬೆಸಗೊಳ್ಳದಿದ್ದಡೆ ನರಕದಲ್ಲಿಕ್ಕಯ್ಯಾ! ರಾಮನಾಥ.
ಈ ರೀತಿ ನೂರಾರು ವಚನಗಳನ್ನು ವಚನಕೋಶದಲ್ಲಿ ಕಾಣುತ್ತೇವೆ. ದೇವರ ದಾಸಿಮಯ್ಯನವರ ವಚನಗಳನ್ನು ರಚಿಸಿರುವವರಲ್ಲಿ ಮೊದಲಿಗರಾದರೂ ಸಹ ಅವರ ವಚನಗಳು ಯಾರಿಗೂ ತಿಳಿದಿಲ್ಲ. ನಂತರ ಬಂದ ಎಲ್ಲಾ ಶರಣರೂ,ಸಾಧು ಸಂತರೂ ರಚಿಸಿದ ವಚನಗಳು ಬಳಕೆಗೆ ಮತ್ತು ಬೆಳಕಿಗೂ ಬ೦ದವು. ದಾಸಿಮಯ್ಯನವರನ್ನು ದೇವರ ದಾಸಿಮಯ್ಯ, ದೇವಲ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಎಂಬ ಹೆಸರಿನಿಂದ ಕರೆಯಲ್ಪಡುತ್ತಾರೆ. ಅವರು ರಾಮನಾಥ ಎಂಬ ದೇವರಲ್ಲಿ ಅಪಾರವಾದ ಭಕ್ತಿಯನ್ನು ಇಟ್ಟು ಕೊಂಡಿದ್ದರು. ಕೊನೆಯಲ್ಲಿ ಇವರ ಆರಾಧ್ಯ ದೈವವಾದ "ರಾಮನಾಥ" ಎಂಬ ಅಂಕಿತವನ್ನು ಕಾಣಬಹುದು.
ಮುಂದೆ ಓದಿ - ದಾಸಿಮಯ್ಯನವರ ಹಿರಿಮೆ ಮತ್ತು ಸಪ್ತವತಾರಗಳು